ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ...
ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ...