ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ...
ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ...
ನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...
ನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...
ಕಾನಿಸ್ಟೇಬಲ್ ನಂಜುಂಡೇ ಗೌಡ ಮುಗುಳ್ನಕ್ಕ. ಹಳ್ಳಿಯ ಅಭ್ಯಾಸದ ಅವನ ನಗೆಯಲ್ಲಿ ಮುಗುಳು ಮತ್ತು ಗಟ್ಟಿ ನಗೆಗಳ ವ್ಯತ್ಯಾಸ ಹೆಚ್ಚು ಗೊತ್ತಾಗಲಿಲ್ಲ. ‘ಯಾಕೆ ನಗ್ತೀರ ?’ ಕಂಬಿಗಳ ಒಳಗಿದ್ದ, ಬಿ.ಇ. ಓದಿ ಉದ್ಯಮಪತಿಯಾದ ಇವನು ಕೇಳಿದ. ‘ಓದಿದ ಗಂಡಸರೆಲ್ಲ ಎಂಗಸರಾಯ್ತಾರೆ. ಓದಿದ ಎಂಗಸರೆಲ್ಲ ಗಂಡಸರಾಯ್ತಾರೆ.’ ಎಂದು ಅವನು ಈಗ ಗಟ್ಟಿಯಾಗಿ ನಕ್ಕ.* * *‘ಯು ಆರ್ ಮೈ ಕಸಿನ್,’ ಬೆಂಗಳೂರಿನ ಅವಳು ಹಳ್ಳಿ ಮನೆಯ ಹಿತ್ತಲಿನ ಪರಂಗಿ ಗಿಡದ ಹತ್ತಿರ ಅವನನ್ನು ಮಾತನಾಡಿಸಿದಳು.‘ನಿನಗೆ ಯಾರು ಇಂಗ್ಲಿಷ್ ಹೇಳಿಕೊಟ್ಟೋರು?’ ಅವನು ಒರಟಾಗಿ ಕೇಳಿದ, ಅವಳ ಸ್ಕೂಲಿನ ಯಾವ ಮಿಸ್ಸಿಗೂ ಇಲ್ಲದ ಒರಟಿನಿಂದ. ಇವನೇನು ನನಗೆ ಟೀಚರಾ ಎಂದು ಅವಳಿಗೆ ರೇಗಿತು.‘ನನ್ನ ಮಿಸ್ಸು.ನನ್ನ ಮಮ್ಮಿ. ನನ್ನ ಮಮ್ಮಿ ಇಂಗ್ಲಿಷ್ ರೀಡರ್.’‘ಸರಿಯಾಗಿ ತಿಳಕ. ನಾನು ನಿನಗೆ ಕಸಿನ್ ಅಲ್ಲ. ಬ್ರದರ್. ಅಂದರೆ ಅಣ್ಣ . ನೀನು ನನಗೆ ಸಿಸ್ಟರ್. ಅಂದರೆ ತಂಗಿ,’ ಎಂದ.‘ಆದರೆ ನನ್ನ ಡ್ಯಾಡಿ ಮಮ್ಮಿ ಬೇರೆ. ನಿನ್ನ ಅಪ್ಪ ಅಮ್ಮ ಬೇರೆ,’ ಅವಳ ಅನುಮಾನ ಬಗೆಹರಿಯಲಿಲ್ಲ.‘ಬೇರೆ ಆದರೇನು? ನಿನ್ನಪ್ಪ ನಮ್ಮಪ್ಪನಿಗೆ ಅಣ್ಣ. ನೀನು ನನಗಿಂತ ಚಿಕ್ಕೋಳು. ಆದ್ದರಿಂದ ನಾನು ನಿನಗೆ ಅಣ್ಣ. ನಿನಗೆ ಇಂಗ್ಲಿಷ್ ಹೇಳಿಕೊಟ್ಟೋರಿಗೆ ಬುದ್ದಿ ಇಲ್ಲ,’ ಅವನು ಮೇಷ್ಟರಗಿರಿ ಮಾಡಿದ.***ಭಾರತೀಯ ಸಮಾಜದಲ್ಲಿ ಕವಲುದಾರಿ ಹಿಡಿಯುತ್ತಿರುವ ಮೌಲ್ಯಗಳನ್ನು ಹೃದಯ ಕಲಕುವಂತೆ ಶೋಧಿಸುತ್ತಾ ಸಮಕಾಲೀನ ಜೀವನಕ್ಕೆ ಕನ್ನಡಿಯಾಗಿರುವ ಕಾದಂಬರಿ ಇದು...
ಕಾನಿಸ್ಟೇಬಲ್ ನಂಜುಂಡೇ ಗೌಡ ಮುಗುಳ್ನಕ್ಕ. ಹಳ್ಳಿಯ ಅಭ್ಯಾಸದ ಅವನ ನಗೆಯಲ್ಲಿ ಮುಗುಳು ಮತ್ತು ಗಟ್ಟಿ ನಗೆಗಳ ವ್ಯತ್ಯಾಸ ಹೆಚ್ಚು ಗೊತ್ತಾಗಲಿಲ್ಲ. ‘ಯಾಕೆ ನಗ್ತೀರ ?’ ಕಂಬಿಗಳ ಒಳಗಿದ್ದ, ಬಿ.ಇ. ಓದಿ ಉದ್ಯಮಪತಿಯಾದ ಇವನು ಕೇಳಿದ. ‘ಓದಿದ ಗಂಡಸರೆಲ್ಲ ಎಂಗಸರಾಯ್ತಾರೆ. ಓದಿದ ಎಂಗಸರೆಲ್ಲ ಗಂಡಸರಾಯ್ತಾರೆ.’ ಎಂದು ಅವನು ಈಗ ಗಟ್ಟಿಯಾಗಿ ನಕ್ಕ.* * *‘ಯು ಆರ್ ಮೈ ಕಸಿನ್,’ ಬೆಂಗಳೂರಿನ ಅವಳು ಹಳ್ಳಿ ಮನೆಯ ಹಿತ್ತಲಿನ ಪರಂಗಿ ಗಿಡದ ಹತ್ತಿರ ಅವನನ್ನು ಮಾತನಾಡಿಸಿದಳು.‘ನಿನಗೆ ಯಾರು ಇಂಗ್ಲಿಷ್ ಹೇಳಿಕೊಟ್ಟೋರು?’ ಅವನು ಒರಟಾಗಿ ಕೇಳಿದ, ಅವಳ ಸ್ಕೂಲಿನ ಯಾವ ಮಿಸ್ಸಿಗೂ ಇಲ್ಲದ ಒರಟಿನಿಂದ. ಇವನೇನು ನನಗೆ ಟೀಚರಾ ಎಂದು ಅವಳಿಗೆ ರೇಗಿತು.‘ನನ್ನ ಮಿಸ್ಸು.ನನ್ನ ಮಮ್ಮಿ. ನನ್ನ ಮಮ್ಮಿ ಇಂಗ್ಲಿಷ್ ರೀಡರ್.’‘ಸರಿಯಾಗಿ ತಿಳಕ. ನಾನು ನಿನಗೆ ಕಸಿನ್ ಅಲ್ಲ. ಬ್ರದರ್. ಅಂದರೆ ಅಣ್ಣ . ನೀನು ನನಗೆ ಸಿಸ್ಟರ್. ಅಂದರೆ ತಂಗಿ,’ ಎಂದ.‘ಆದರೆ ನನ್ನ ಡ್ಯಾಡಿ ಮಮ್ಮಿ ಬೇರೆ. ನಿನ್ನ ಅಪ್ಪ ಅಮ್ಮ ಬೇರೆ,’ ಅವಳ ಅನುಮಾನ ಬಗೆಹರಿಯಲಿಲ್ಲ.‘ಬೇರೆ ಆದರೇನು? ನಿನ್ನಪ್ಪ ನಮ್ಮಪ್ಪನಿಗೆ ಅಣ್ಣ. ನೀನು ನನಗಿಂತ ಚಿಕ್ಕೋಳು. ಆದ್ದರಿಂದ ನಾನು ನಿನಗೆ ಅಣ್ಣ. ನಿನಗೆ ಇಂಗ್ಲಿಷ್ ಹೇಳಿಕೊಟ್ಟೋರಿಗೆ ಬುದ್ದಿ ಇಲ್ಲ,’ ಅವನು ಮೇಷ್ಟರಗಿರಿ ಮಾಡಿದ.***ಭಾರತೀಯ ಸಮಾಜದಲ್ಲಿ ಕವಲುದಾರಿ ಹಿಡಿಯುತ್ತಿರುವ ಮೌಲ್ಯಗಳನ್ನು ಹೃದಯ ಕಲಕುವಂತೆ ಶೋಧಿಸುತ್ತಾ ಸಮಕಾಲೀನ ಜೀವನಕ್ಕೆ ಕನ್ನಡಿಯಾಗಿರುವ ಕಾದಂಬರಿ ಇದು...
೧೫೦ ಅಡಿ ಅಗಲ, ೩೦೦ ಅಡಿ ಉದ್ದದ ಆಕಾಶ ನೌಕೆಯನ್ನು ಕಟ್ಟಿ ಅದರಲ್ಲಿ ಒಬ್ಬ ಗಂಡು, ಒಬ್ಬಳು ಹೆಣ್ಣನ್ನು ಕೂರಿಸಿ ೪.೬ ಜ್ಯೋತಿರ್ವರ್ಷ ದೂರದಲ್ಲಿರುವ ಪ್ರಾಕ್ಸಿಮಾ ಸೆಂಟಾರಿಸ್ ನಕ್ಷತ್ರಮಂಡಲವನ್ನು ತಲುಪುವ ಯೋಜನೆಗೆ ಕಳಿಸುತ್ತಾರೆ. ಸೂರ್ಯಮಂಡಲದಲ್ಲಿ ಸೃಷ್ಟಿಸಿಕೊಂಡ ನೈತಿಕ ನಿಯಮಗಳು ಸೂರ್ಯನ ಗುರುತ್ವಾಕರ್ಷಣೆಯ ವಲಯದ ಆಚೆಗೆ ಹೋದಮೇಲೂ ಸಿಂಧುವಾಗುತ್ತವೆಯೆ ? ಎಂಬಂಥ ಪ್ರಶ್ನೆಗಳನ್ನು ಈ ಪಾತ್ರಗಳು ಎದುರಿಸಬೇಕಾಗುತ್ತದೆ.ಭೈರಪ್ಪನವರ ಪಾತ್ರಶೋಧನೆಯು ಇದುವರೆಗೆ ವಿಸ್ತರಿಸಿಕೊಂಡಿರದ ವ್ಯಾಪ್ತಿಗೆ ‘ಯಾನ’ದಲ್ಲಿ ಬೆಳೆದಿದೆ. ಕನ್ನಡ ಸಾಹಿತ್ಯದಲ್ಲಿ ಇಲ್ಲಿಯತನಕ ಕಾಣದ ವಸ್ತುವು ಈ ಕಾದಂಬರಿಯಲ್ಲಿ ಜೀವಂತವಾಗಿ ಮೂಡಿಬಂದಿದೆ.ಪ್ರಕಾಶಕರು – ಸಾಹಿತ್ಯ ಭಂಡಾರ..
ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ...
ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ...